Adamya Chetana

Adamya Green #496

ಅದಮ್ಯ ಚೇತನದ 496ನೇ ಹಸಿರು ಭಾನುವಾರ ಕಾರ್ಯಕ್ರಮವು ಜೂನ್ 29 ರಂದು ಕರ್ನಾಟಕ ರಾಜ್ಯ ರೇಷ್ಮೆ ಕೃಷಿ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ, ಮೆಟ್ರೋ ಸಿಲ್ಕ್ ಇನ್ಸ್ಟಿಟ್ಯೂಟ್ ಸ್ಟಾಪ್ ಹತ್ತಿರ, ಕನಕಪುರ ನೈಸ್ ರಸ್ತೆ, ಬೆಂಗಳೂರು ಇಲ್ಲಿ ಯಶಸ್ವಿಯಾಗಿ ನಡೆಯಿತು.

ಗಿಡ ನೆಡುವ ಕಾರ್ಯಕ್ರಮ, ಸ್ವಚ್ಛತಾ ಅಭಿಯಾನ ಹಾಗೂ ಪರಿಸರ ಜಾಗೃತಿ ಇತ್ಯಾದಿ ಚಟುವಟಿಕೆಗಳ ಮೂಲಕ ಹಸಿರು ಭಾನುವಾರದಲ್ಲಿ ಎಲ್ಲಾ ಪರಿಸರಸ್ನೇಹಿಗಳು ಉತ್ಸಾಹದಿಂದ ಪಾಲ್ಗೊಂಡರು. ಹಸಿರಿನ ಕನಸು ಸಾಕಾರವಾಗಲಿ ಎಂಬ ಆಶಯದಿಂದ ಇದೊಂದು ಸ್ಮರಣೀಯ ದಿನವಾಗಿತ್ತು.
ಪರಿಸರ ಸಂರಕ್ಷಣೆಯ ಅಗತ್ಯತೆಯ ಬಗ್ಗೆ ಜಾಗೃತಿ ಮೂಡಿಸಲು ನಡೆದ ಈ ವಿಶೇಷ ಕಾರ್ಯಕ್ರಮದಲ್ಲಿ, ಹಸಿರು ಯೋಧರು, ಅದಮ್ಯ ಚೇತನ ಸಿಬ್ಬಂದಿಗಳು, ಸ್ವಯಂಸೇವಕರು, ಪರಿಸರ ಪ್ರೇಮಿಗಳು ಮತ್ತು ಸ್ಥಳೀಯ ನಾಗರಿಕರು ಭಾಗವಹಿಸಿದ್ದರು.